ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಲ್ಲಿ
ಅರಿವು ಶೈಕ್ಷಣಿಕ ಸಾಲ ಯೋಜನೆಯ ಅನುಷ್ಠಾನದ ಮಾರ್ಗಸೂಚಿಗಳು
ಈ ಯೋಜನೆಯಲ್ಲಿ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ, ಸ್ಮಾತಕೋತ್ತರ ಪದವಿ ಮತ್ತು ಪಿ.ಎಚ್.ಡಿ., ಕೋರ್ಸ್ಗಳಲ್ಲಿ ಸಿ.ಇ.ಟಿ. ಮೂಲಕ ಆಯ್ಕೆಯಾಗಿ ವ್ಯಾಸಂಗ ಮಡುವ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ. 2ರ ಬಡ್ಡಿದರದಲ್ಲಿ ವಾರ್ಷಿಕ ಗರಿಷ್ಠ ರೂ.1,00,000/-ಗಳ ಶೈಕ್ಷಣಿಕ ಸಾಲವನ್ನು ಮಂಜೂರು ಮಾಡುವುದು.
1
|
ಅರ್ಹತೆ:
|
ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿಬೇಕು.
|
2
|
ಆದಾಯ ಮಿತಿ:
|
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು.
|
3
|
ವಯೋಮಿತಿ:
|
ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದೊಳಗಿನವರಾಗಿರಬೇಕು.
|
4
|
ವಿಳಾಸ:
|
ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಲು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.
|
5
|
ಮಹಿಳೆಯರ ಮೀಸಲಾತಿ:
|
ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಶೇ.33ರಷ್ಟು ಮಹಿಳಾ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು.
|
6
|
ಅಂಗವಿಕಲರ ಮೀಸಲಾತಿ:
|
ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಶೇ.5ರಷ್ಟು ಅಂಗವಿಕಲ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು.
|
7
|
|
ಒಂದು ಕುಟುಂಬದಲ್ಲಿ ಎರಡು ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಬೇಕು.
|
ಅ.
|
ಫೀ ಸ್ಟ್ರಕ್ಟರ್:
|
ಕರ್ನಾಟಕ ಪರೀಕ್ಷಾ ಪ್ರಾಧಿಕಾರರವರಿಂದ ನಿಗದಿಪಡಿಸಿರುವ ಸಿ.ಇ.ಟಿ. ಫೀಯನ್ನು ಮತ್ತು ಪ್ರವೇಶ ಶುಲ್ಕ, ಟ್ಯೂಷನ್ ಫೀ, ಹಾಸ್ಟೆಲ್ ಫೀ, ಪುಸ್ತಕ, ಲ್ಯಾಪ್ಟಾಪ್, ಪರೀಕ್ಷಾ ಶುಲ್ಕ ಇತ್ಯಾದಿ ಫೀಗಳನ್ನು ವಾರ್ಷಿಕ ರೂ.1,00,000/-ಗಳ ಮಿತಿಯೊಳಗೆ ಸಾಲ ನೀಡುವುದು. ಸಿ.ಇ.ಟಿ. ಮುಖಾಂತರ ಆಯ್ಕೆಯಾಗಿರುವ ಕಾಲೇಜಿನ ಪ್ರಾಂಶುಪಾಲರಿಂದ ಧೃಡೀಕರಿಸಿ ನೀಡಿರುವ ಫೀ ಸ್ಟ್ರಕ್ಟರ್ ಅನ್ವಯ ಸಾಲ ನೀಡಬೇಕಾಗಿದೆ.
|
ಆ.
|
ಹಾಸ್ಟೆಲ್ ಫೀ :
|
ವಿದ್ಯಾರ್ಥಿಯ ವ್ಯಾಸಂಗ ಮಾಡುತ್ತಿರುವ ಕಾಲೇಜಿನಲ್ಲೇ ಹಾಸ್ಟೆಲ್ ಸೌಲಭ್ಯ ಪಡೆದಿದ್ದಲ್ಲಿ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರ ದೃಢೀಕರಣ ಪತ್ರ ಹಾಗೂ ಜಿಲ್ಲಾ ವ್ಯವಸ್ಥಾಪಕರ ತಪಾಸಣ ವರದಿಯ ಮೇರೆಗೆ ಹಾಸ್ಟೆಲ್ ಫೀ ನೀಡುವುದು.
|
8
|
ಆಯ್ಕೆ ವಿಧಾನ:
|
ಈ ಯೋಜನೆಯಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಕೆಳಕಂಡಂತೆ
|
ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ವಿವರ
ಕ್ರ.
ಸಂ.
|
ಅಧಿಕಾರಿಗಳು
|
ಪದನಾಮ
|
1
|
ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಲೀಡ್ ಬ್ಯಾಂಕ್ ವ್ಯವಸ್ಥಾಪಕರು
|
ಅಧ್ಯಕ್ಷರು
|
2
|
ಲೀಡ್ ಬ್ಯಾಂಕ್ ವ್ಯವಸ್ಥಾಪಕರು
|
ಸದಸ್ಯರು
|
3
|
ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
|
ಸದಸ್ಯರು
|
4
|
ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
|
ಸದಸ್ಯರು
|
5
|
ಪ್ರಧಾನ ವ್ಯವಸ್ಥಾಪಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಸದಸ್ಯರು
|
ಸದಸ್ಯರು
|
6
|
ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ
|
ಸದಸ್ಯರು
|
7
|
ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ / ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಸದಸ್ಯರು
|
ಕಾರ್ಯದರ್ಶಿ
|
|
|
|
|
09
|
ಸಾಲದ ಮರುಪಾವತಿ ಅವಧಿ:
|
ಈ ಯೋಜನೆ ಅಡಿಯಲ್ಲಿ ಪಡೆದ ಸಾಲವನ್ನು 3 ವರ್ಷಗಳ ಅವಧಿಯಲ್ಲಿ 36 ಮಾಸಿಕ ಕಂತುಗಳಲ್ಲಿ ಅಸಲು ಮತ್ತು ಬಡ್ಡಿ ಸೇರಿಸಿ ಮರುಪಾವತಿಸಬೇಕು ವಿದ್ಯಾರ್ಥಿಯು ವ್ಯಾಸಂಗ ಪೂರ್ಣಗೊಂಡ 4ನೇ ತಿಂಗಳಿಂದ ಮರು ಪಾವತಿಸಬೇಕು. ಈ 4 ತಿಂಗಳ ವಿರಾಮ ಅವಧಿ ಇರುತ್ತದೆ.
|
10
|
|
ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು.
|
|